ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

