ಬೆಂಗಳೂರು: ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಗನ ಶವದ ಮುಂದೆಯಾಎ ತಾಯಿ ಮರಣವೊಂದಿರುವ ಘಟನೆ ನಗರದಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿ ಕ್ಯಾಬ್ ಚಾಲಕ ಅರುಣ್ ಕುಮಾರ್(27) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದ. ಅಪಾರ ಸಾಲ ಮಾಡಿಕೊಂಡಿದ್ದ ಕಾರಣಕ್ಕೆ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿತ್ತು.
ಒಂದು ವರ್ಷದ ಹಿಂದೆ ಅವರ ತಾಯಿ ಸರಸ್ವತಿ(78) ಕೂಡ ಬೆನ್ನುಮೂಳೆ ಮುರಿತಕ್ಕೊಳಗಾಗಿ ಹಾಸಿಗೆ ಹಿಡಿದಿದ್ದರು. ಸಹೋದರರು ತಾಯಿಯ ಯೋಗಕ್ಷೇಮ ನೋಡುತ್ತಿರಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿದ್ದ ಅರುಣ್ ಕುಮಾರ್, ಭಾನುವಾರ ಮಧ್ಯಾಹ್ನ ಡೆತ್ ನೋಟ್ ಬರೆದಿಟ್ಟು ಮನೆಯ ರೂಮಿನಲ್ಲಿ ನಾಎಣುಬಿಗಿದುಕೊಂಡಿದ್ದ.
ಮಗನ ಸಾವನ್ನು ಕಂಡ ತಾಯಿ ಸರಸ್ವತಿ, ಮಗನ ಶವದ ಮುಂದೆ ಕುಳಿತು ದುಃಖಿಸುತ್ತಿರುವಾಗಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೃತನ ಸಹೋದರ ನೀಡಿದ ದೂರಿನ ಅನ್ವಯ ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಂಡಿರುವ ಕಾಮಾಕ್ಷಿಪಾಳ್ಯ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

