ಬೆಂಗಳೂರು: ನಿರ್ದೇಶಕ ನಾಗಶೇಖರ್ ಅವರ ಕಾರು ಅಪಘಾಕ್ಕೀಡಾಗಿ ಮಹಿಳೆಗೆ ಗಾಯವಾಗಿದೆ.
ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗಶೇಖರ್ ಅವರು ಕಾರು ಚಾಲನೆ ಮಾಡಿಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿದ ಕಾರು ಬಸ್ ತಂಗುದಾಣದಲ್ಲಿ ನಿಂತಿದ್ದ ದೊಡ್ಡಗೊಲ್ಲರಹಟ್ಟಿ ನಿವಾಸಿ ಲಕ್ಷ್ಮೀ ಎಂಬುವವರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ..
ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯನ್ನು ನಾಗಶೇಖರ್ ಅವರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಠಾಣೆಗೆ ಬಂದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.