ಅಪರಾಧ ಸುದ್ದಿ

ಮಚ್ಚಿನಿಂದ ಕೊಚ್ಚಿ ಮಡದಿಯನ್ನೇ ಕೊಲೆ ಮಾಡಿದ ಕುಡುಕ ಪತಿ

Share It

ಬೆಂಗಳೂರು: ಪಾನಮತ್ತನಾಗಿ ಬಂದ ಗಂಡ ಮಡದಿಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ಬಾಗಲೂರು ಠಾಣೆ ವ್ಯಾಪ್ತಿಯ ಸಿಂಗೇನಹಳ್ಳಿಯಲ್ಲಿ ನಡೆದಿದೆ.

ಶ್ರೀನಿವಾಸ್ ಎಂಬ ಆರೋಪಿ ತನ್ನ ಪತ್ನಿ ಸುಧಾ ಎಂಬಾಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ವಿಚಾರಣೆ ಕೈಗೊಂಡಿದ್ದಾರೆ. ಕೋಳಿ ಅಂಗಡಿ ನಡೆಸುತ್ತಿದ್ದ ಶ್ರೀನಿವಾಸ್, ನಿತ್ಯ ಪಾನಮತ್ತನಾಗಿ ಪತ್ನಿಯೊಂದಿಗೆ ಗಲಾಟೆ ಮಾಡುತ್ತಿದ್ದ. ಗಂಡನ ಕಾಟಕ್ಕೆ ಬೇಸತ್ತ ಸುಧಾ, ಹೊಸಕೋಟೆಯ ತನ್ನ ತವರುಮನೆ ಸೇರಿದ್ದಳು.

ಕಳೆದ ಒಂದು ತಿಂಗಳ ಹಿಂದಷ್ಟೆ ಕುಟುಂಬಸ್ಥರು ರಾಜಿ ಸಂಧಾನ ಮಾಡಿ ಗಂಡನ ಮನೆಗೆ ಮರಳಿದ್ದಳು. ಎರಡು ದಿನಗಳಿಂದ ಪುನಃ ಗಲಾಟೆ ಆರಂಭಿಸಿದ್ದ ಶ್ರೀನಿವಾಸ್, ತಡರಾತ್ರಿ ಕೋಳಿ ಕತ್ತರಿಸುವ ಮಚ್ಚಿನಿಂದ ಸುಧಾಳ ತಲೆ, ಕೈಗೆ ಹೊಡೆದು ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Share It

You cannot copy content of this page