KKRTC ನೌಕರರ ಕುಟುಂಬಕ್ಕೆ ಗುಡ್ ನ್ಯೂಸ್: ಪ್ರತಿ ಸಿಬ್ಬಂದಿಗೆ 1 ಕೋಟಿ ರು. ವಿಮಾ ಸೌಲಭ್ಯ

Share It

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ತನ್ನ ನೌಕರರ ಕಲ್ಯಾಣಕ್ಕೆ ಹೊಸ ಒಡಂಬಡಿಕೆ ಮಾಡಿಕೊಂಡಿದ್ದು, ಪ್ರತಿ ಸಿಬ್ಬಂದಿಗೆ 1 ಕೋಟಿ ವಿಮಾ ಸೌಲಭ್ಯ ಒದಗಿಸಿದೆ.

ಒಡಂಬಡಿಕೆಗೆ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಡಿವಿಜನಲ್ ಜನರಲ್ ಮ್ಯಾನೇಜರ್ ಮನೋಜ್ ಕುಮಾರ ಟೋಪೋ ಸಹಿ ಹಾಕಿದರು.

ಯೋಜನೆಯಲ್ಲಿ ನಿಗಮದ ನೌಕರರ ವೇತನ ಖಾತೆಗಳನ್ನು Corporate Salary Package” ಅಡಿಯಲ್ಲಿ ಪ್ರೀಮಿಯಂ ರಹಿತ ಅಪಘಾತ ವಿಮೆ ವೈಯಕ್ತಿಕ ಅಥವಾ ಕರ್ತವ್ಯದ ಮೇಲೆ ಅಪಘಾತದಲ್ಲಿ ನಿಧನರಾದಲ್ಲಿ ರೂ.1 ಕೋಟಿ ಹಾಗೂ ಸಹಜ ನಿಧನಕ್ಕೆ ರೂ.6 ಲಕ್ಷಗಳ “Term Insurance” ಪಾಲಿಸಿಯೊಂದಿಗೆ ಇತರೇ ಸೌಲಭ್ಯಗಳನ್ನು ಸಹ ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವುದು.

ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಮಾತನಾಡಿ, ನಿಗಮವು ನೌಕರರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಅಲ್ಲದೇ ನಿಗಮದಲ್ಲಿ  13150 ನೌಕರರು ಎಸ್.ಬಿ.ಐ. ಬ್ಯಾಂಕಿನಲ್ಲಿ ವೇತನ ಖಾತೆಯನ್ನು ಹೊಂದಿರುವುದರಿಂದ ಪ್ರೀಮಿಯಂ ರಹಿತ ಅಪಘಾತ ವಿಮೆ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆಂದು ತಿಳಿಸುತ್ತಾ ಪ್ರಸ್ತುತ ನಿಗಮ ಮತ್ತು ಬ್ಯಾಂಕಿನ ಸಹಕಾರ ಇದೇ ರೀತಿಯಾಗಿ ಮುಂದುವರೆಯಲೆಂದು ತಿಳಿಸಿದರು.

ಅಪಘಾತದಲ್ಲಿ ನಿಧನರಾದ ನೌಕರರ ಅವಲಂಬಿತರಿಗೆ ಆದ್ಯತೆಯ ಮೇರೆಗೆ ಪ್ರಕರಣಗಳನ್ನು ಇತ್ಯರ್ಥಪಡಿಸಿ ಪರಿಹಾರ ಮೊತ್ತವನ್ನು ನಾಮನಿರ್ದೇಶಿತರಿಗೆ ಒದಗಿಸಲು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕ.ರಾ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಎಸ್.ಬಿ.ಐ ಬ್ಯಾಂಕಿನ ಹಿರಿಯ ಅಧಿಕಾರಿ ವಿಜಯ್ ಕೆ ಟಿ, ಎಎಸ್ ಎಂ, ದೇವಕಿನಂದನ್, ಎಎಸ್ ಎಂ, ಸಂಜಯ್ ಕುಮಾರ್, ಎಎಸ್ ಎಂ, ಅಂಕಿತ್ ಸಾಹು, ಸಿ ಎಂ ಮತ್ತು ಕಕರಾಸಾ ನಿಗಮದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Share It

You May Have Missed

You cannot copy content of this page