ರಾಜಕೀಯ ಸುದ್ದಿ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

Share It

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕಾರಣದ ದೊಡ್ಡದೊಂದು ವಿವಾದಕ್ಕೆ ತೆರೆ ಎಳೆದಿದ್ದಾರೆ.

ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ ಸಿಎಂ ಸಿದ್ದರಾಮಯ್ಯ ನಂತರ ಗೃಹ ಕಚೇರಿ ಕೃಷ್ಣ ದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿ ತಮ್ಮ ಅವಧಿಯಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ವಿವರಿಸಿದರು.

ಇದೆ ಸಂದರ್ಭದಲ್ಲಿ ತಾವು ಇನ್ನೆರೆಡು ವರ್ಷ ಶಾಸಕರಾಗಿಯೇ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿ, ಹೈಕಮಾಂಡ್ ನೀಡಿದ ರಾಜ್ಯಸಭಾ ಆಫರ್ ಅನ್ನು ನಯವಾಗಿ ತಿರಸ್ಕಾರ ಮಾಡಿರುವುದುದಾಗಿ ತಿಳಿಸಿದರು.


Share It

You cannot copy content of this page