ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು ನಡೆದಿದ್ದು, ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ಸಭೆಯಲ್ಲಿ ಸಚಿವರು ರಾಜ್ಯದಲ್ಲಿ ಬರದ ಪರಿಸ್ಥಿತಿ ಇದ್ದು ಸದ್ಯದ ಪರಿಸ್ಥಿತಿಯಲ್ಲಿ ನೀರು ಹರಿಸಲು ಸಾಧ್ಯವಿಲ್ಲ. ಪ್ರಸ್ತುತ ನೀರು ಕುಡಿಯುವ ಅಗತ್ಯತೆಗೆ ತಕ್ಕಷ್ಟೇ ಇದೆ ಎಂದು ವದ ಮಾಡಿಸಿದರು. ಮಾನ್ಸೂನ್ ಮಳೆಯ ಪ್ರಮಾಣ ನೋಡಿಕೊಂಡು ನೀರು ಹರಿಸುವ ಕುರಿತು ಕಚೇರಿ ನೀರು ಪ್ರಾಧಿಕಾರದ ಅಧ್ಯಕಕ್ಷರಿಗೆ ವಿವರಣೆ ನೀಡಿದರು.
ಸಭೆಯಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

