ರಾಜಕೀಯ ಸುದ್ದಿ

ಆಪರೇಷನ್ ಸಿಂಧೂರ್ ಮೂಲಕ ಉಗ್ರರ ಧಮನ : ವಿಶೇಷ ಪೂಜೆಗೆ ಮುಜರಾಯಿ ಸಚಿವರ ಆದೇಶ

Share It


ಬೆಂಗಳೂರು: ಪಹಲ್ಗಾಮ್ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಇದರ ಅಂಗವಾಗಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ಇಲಾಖೆ ಆದೇಶಿಸಿದೆ.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಆದೇಶದ ಅನ್ವಯ, ಮುಜರಾಯಿ ಇಲಾಖೆ ಆಯುಕ್ತರಾದ ಎಂ.ವಿ. ವೆಂಕಟೇಶ್, ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಮ್ಮ ಸೈನಿಕರಿಗೆ ಶಕ್ತಿ ತುಂಬಿವಂತೆ ಬೇಡಿಕೊಳ್ಳುವಂತೆ ತಿಳಿಸಿದ್ದಾರೆ.

ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿರುವ ಸೇನೆಗೆ ಅಭಿನಂದನೆ ಸಲ್ಲಿಸಿರುವ ಸಾರಿಗೆ ಮತ್ತು ಮುಜರಾಯಿ ಸಚಿವರು, ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಮೂಲಕ ನಮ್ಮ ಸೈನ್ಯಕ್ಕೆ ಹೆಚ್ಚಿನ ಬಲ ನೀಡಲು ಮತ್ತು ಸೈನಿಕರಿಗೆ ಬೆಂಬಲ ಸೂಚಿಸಲು ಆದೇಶಿಸಿದ್ದು, ಅದರಂತೆ ರಾಜ್ಯದ ಸುಮಾರು 35,000 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜನೆ ಮಾಡಲಾಗಿದೆ.


Share It

You cannot copy content of this page