ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್, ಪವಿತ್ರ ಗೌಡ ಸೇರಿ 6 ಮಂದಿಯ ಜಾಮೀನು ಭವಿಷ್ಯ ಇಂದು

Share It

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರ ಗೌಡ ಸೇರಿ 6 ಮಂದಿ ಆರೋಪಿಗಳ ಜಾಮೀನು ಭವಿಷ್ಯ ಇಂದು ತೀರ್ಮಾನವಾಗಲಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪುರ್ಣಗೊಳಿಸಿರುವ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋಟ್೯ ಈಗಾಗಲೇ ತೀರ್ಪು ಕಾಯ್ದಿರಿಸಿರುವ ರವಿ ಶಂಕರ್, ಲಕ್ಷ್ಮಣ್, ನಾಗರಾಜ್ ಮತ್ತು ದೀಪಕ್ ಅವರ ಅರ್ಜಿಗಳ ತೀರ್ಪನ್ನು ಇಂದು ಪ್ರಕಟಿಸಲಿದೆ.

ದರ್ಶನ್ ಪರ ಸಿ.ವಿ.ನಾಗೇಶ್ ಜಾಮೀನು ನೀಡದಂತೆ ಪ್ರಸನ್ನ ಕುಮಾರ್ ಇಬ್ಬರೂ ವಾದ ಮಂಡಿಸಿದ್ದರು. ಪೊಲೀಸ್ ತನಿಖೆಯಲ್ಲಿ ಲೋಪ ದೋಷಗಳಿವೆ ಇದೆ ಎಂದು ಹಲವು ಅಂಶಗಳನ್ನು ಸಿ.ವಿ.ನಾಗೇಶ್ ಉಲ್ಲೇಖಿಸಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಈ ಕೊಲೆ ಪ್ರಕರಣ ಕ್ರೂರವಾದ ರಕ್ತ ಚರಿತ್ರೆ. ಕೃತ್ಯಕ್ಕೆ ಸಿಸಿ ಟಿವಿ ದೃಶ್ಯಗಳು, ಪೊಟೋಗಳು ಇವೆ. ಆರೋಪಿ ದರ್ಶನ್ ಕೊಲೆಯಲ್ಲಿ ಭಾಗವಹಿಸಿದ್ದಕ್ಕೆ ಪ್ರಬಲ ಸಾಕ್ಷಿಗಳು ಇವೆ ಎಂದು ವಾದಿಸಿದ್ದರು.


Share It

You cannot copy content of this page