ಬೆಳಗಾವಿ-ಹುಬ್ಬಳ್ಳಿ ಮಧ್ಯೆ ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣ : ಎಂ.ಬಿ.ಪಾಟೀಲ

Share It

ಬೆಳಗಾವಿ: ಬೆಳಗಾವಿ ಇಲ್ಲವೇ ಹುಬ್ಬಳ್ಳಿ ಅಥವಾ ಇವೆರಡು ನಗರಗಳ ಮಧ್ಯೆ 100 ಎಕರೆ ಪ್ರದೇಶದಲ್ಲಿ ಸ್ಟಾರ್ಟ್ ಅಪ್ ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಈ ಪ್ರದೇಶದಲ್ಲಿ ನವ ಉದ್ಯಮಿಗಳಿಗೆ ನಿವೇಶನ ಕಲ್ಪಿಸಿ ಕಾರ್ಯನಿರ್ವಣೆಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಒದಗಿಸಲಾಗುತ್ತದೆ. ದೇಶದಲ್ಲಿ ಸದ್ಯ ಸ್ಟಾರ್ಟ್ ಅಪ್ ಗಳಲ್ಲಿ ಶೇಕಡಾ 43 ರಷ್ಟು ಬೆಂಗಳೂರಿನಲ್ಲಿವೆ. ಈ ಭಾಗದ ಯುವಕರು ಸಂಶೋಧನೆಗಳ ಮೂಲಕ ತಮ್ಮ ಕನಸು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಬೆಳಗಾವಿ-ಹುಬ್ಬಳ್ಳಿ ನಡುವೆ ಸ್ಟಾರ್ಟ್ ಅಪ್ ಬೇಡಿಕೆ ಇದೆ. ಮೂರು ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಕಿತ್ತೂರು ಬಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾವನೆ ಏನಾಯ್ತು ?

ಬೆಳಗಾವಿ ಮತ್ತು ಹುಬ್ಬಳ್ಳಿ ನಡುವೆ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ನಡೆಯುತ್ತಿರುವ ಪ್ರಯತ್ನಗಳ ಬಗ್ಗೆಯೂ ಅವರು ಚರ್ಚಿಸಿದರು.

ಕಿತ್ತೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವನೆ ಇದ್ದರೂ, ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳನ್ನು ಇತ್ತೀಚೆಗೆ ಮೇಲ್ದರ್ಜೆಗೇರಿಸಿರುವುದರಿಂದ ಆ ಬೆಳವಣಿಗೆ ಕಷ್ಟಕರವಾಗಿದೆ ಎಂದು ಅವರು ಹೇಳಿದರು.

ಆದಾಗ್ಯೂ, ಈ ಪ್ರದೇಶದಲ್ಲಿ ಕೈಗಾರಿಕಾ ಮೂಲಸೌಕರ್ಯವನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆ. ಧಾರವಾಡ ಮತ್ತು ಬೆಳಗಾವಿ ನಡುವಿನ ನೇರ ರೈಲು ಮಾರ್ಗಕ್ಕೆ ಸಂಬಂಧಿಸಿದ ಸವಾಲುಗಳನ್ನು ವಿವರಿಸಿ, ಧಾರವಾಡ ಮತ್ತು ಬೆಳಗಾವಿ ನಡುವೆ ನೇರ ರೈಲು ಮಾರ್ಗವನ್ನು ನಿರ್ಮಿಸಲಾಗುತ್ತದೆ, ಆದರೆ ಹಲವು ಸಮಸ್ಯೆಗಳು ಮುಂದುವರಿದಿವೆ. ಈ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ಇತ್ತೀಚೆಗೆ ಸಭೆ ನಡೆಸಲಾಗಿದ್ದು, ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇದಲ್ಲದೆ, ಪ್ರಸ್ತಾವಿತ ಬದಲಾವಣೆಗಳು ಬೆಳಗಾವಿ ಮತ್ತು ಬೆಂಗಳೂರು ನಡುವಿನ ರೈಲು ಪ್ರಯಾಣದ ಸಮಯವನ್ನು ಐದು ಗಂಟೆಗಳವರೆಗೆ ಕಡಿಮೆ ಮಾಡಬಹುದು. ಆದರೆ, ಪ್ರಸ್ತಾವಿತ ಅಲೈನ್ ಮೆಂಟ್ ಬದಲಾವಣೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯಿಂದ ಒಂದಷ್ಟು ಪ್ರತಿರೋಧ ವ್ಯಕ್ತವಾಗಿದ್ದು, ಸಚಿವ ಪಾಟೀಲ್ ಸಂಬಂಧಪಟ್ಟ ಶಾಸಕರು ಮತ್ತು ಸಚಿವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದರು.


Share It

You May Have Missed

You cannot copy content of this page