ಅಪರಾಧ ಸುದ್ದಿ

ಗಣಪತಿ ಪ್ರತಿಷ್ಠಾಪನೆ ಮಾಡಲು ಹೊರಟಿದ್ದ ಇಬ್ಬರು ಯುವಕರು ಸಾವು, ನಾಲ್ವರಿಗೆ ಗಂಭೀರ ಗಾಯ

Share It

ತರೀಕೆರೆ: ಗಣೇಶನ ಪ್ರತಿಷ್ಠಾಪನೆ ಮಾಡುವ ಸಲುವಾಗಿ ಮೂರ್ತಿ ತರಲು ತೆರಳುತ್ತಿದ್ದ ಟಾಟಾ ಎಸಿಯೊಂದು ಮಗುಚಿಬಿದ್ದು ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸರ್ಕಲ್ ನಲ್ಲಿ ಘಟನೆ ನಡೆದಿದ್ದು, ರಸ್ತೆಯ ತಿರುವಿನಲ್ಲಿ ಟಾಟಾ ಎಸಿ ಮಗುಚಿಬಿದ್ದಿದ್ದು, ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಸಲುವಾಗಿ ಮೂರ್ತಿ ಖರೀದಿಸಿ ತರಲು ಒಂಬತ್ತು ಯುವಕರು ತರೀಕೆರೆಗೆ ಟಾಟಾ ಎಸಿ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಎಸಿ ವಾಹನ ತಿರುವಿನಲ್ಲಿ ಮಗುಚಿಬಿದ್ದಿದೆ.


Share It

You cannot copy content of this page