ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 18ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ನಿನ್ನೆ ಬುಧವಾರ ಇಲ್ಲೆಲ್ಲಾ ಮಳೆ
ಕೊಟ್ಟಿಗೆಹಾರ, ಮಂಕಿ, ಹೊನ್ನಾವರ, ಗೇರುಸೊಪ್ಪ, ಶಿರಾಲಿ, ಕಾರ್ಕಳ, ಪೊನ್ನಂಪೇಟೆ, ಪಣಂಬೂರು, ಕೋಟ, ಧರ್ಮಸ್ಥಳ, ಗೋಕರ್ಣ, ಪುತ್ತೂರು, ಉಪ್ಪಿನಂಗಡಿ, ಮುಲ್ಕಿ, ಮಂಠಾಳ, ಲೋಂಡಾ, ಕೊಪ್ಪ, ಲಿಂಗನಮಕ್ಕಿ, ಹಾಸನ, ಶೃಂಗೇರಿ, ಶಿವಮೊಗ್ಗ, ಹುಂಚದಕಟ್ಟೆ, ಸೋಮವಾರಪೇಟೆ, ಜಯಪುರದಲ್ಲಿ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದೆ.