ರಾಜ್ಯದ ಈ ಜಿಲ್ಲೆಗಳಲ್ಲಿ ಅ.8 ರವರೆಗೂ ಮಳೆ
ಬೆಂಗಳೂರು : ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 8ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ನಿನ್ನೆ ಈ ಪ್ರದೇಶಗಳಲ್ಲಿ ಮಳೆ
ಪುತ್ತೂರು, ಹುಕ್ಕೇರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಬಾಳೆಹೊನ್ನೂರು, ತಿಪಟೂರು, ಚಿಕ್ಕೋಡಿ, ಕೊಟ್ಟಿಗೆಹಾರ, ಕಳಸ, ದಾವಣಗೆರೆ, ಉಪ್ಪಿನಂಗಡಿ, ಬೈಲಹೊಂಗಲ, ಬೀದರ್, ಜಯಪುರ, ಎನ್ಆರ್ಪುರ, ಮೂಡಿಗೆರೆ, ಕಾರ್ಕಳ, ಮುಂಡಗೋಡು, ಧರ್ಮಸ್ಥಳ, ಕುಂದಗೋಳ, ಲಿಂಗಸುಗೂರು, ಹುಂಚದಕಟ್ಟೆ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಶುಭ್ರ ಆಕಾಶವಿರುವ ಕಾರಣ ಮಳೆ ಸಾಧ್ಯತೆ ಕಡಿಮೆ.


