ರಾಜಕೀಯ ಸುದ್ದಿ

ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ತಲಾ 25 ಲಕ್ಷ ರೂ. ನೀಡಲು ರಾಜ್ಯಸರ್ಕಾರ ನಿರ್ಧಾರ

Share It

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. 10 ಲಕ್ಷ ರೂಪಾಯಿ ಸಾಕಾಗಲ್ಲ. ಸರ್ಕಾರ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು.

ಜೂನ್ 4 ರಂದು ಆರ್​ಸಿಬಿ ಚಿನ್ನಸ್ವಾಮಿ ಮೈದಾನದಲ್ಲಿ ವಿಕ್ಟರಿ ಪರೇಡ್ ಇಟ್ಟುಕೊಂಡಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್​ಸಿಬಿ ಅಭಿಮಾನಿಗಳು ಬಂದಿದ್ದರು. ಆಗ ನೂಕುನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಸಂಭವಿಸಿತ್ತು.

ಈ ದುರಂತದಲ್ಲಿ ಒಟ್ಟು 11 ಆರ್​ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಾಯಗೊಂಡವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುವ ಭರವಸೆ ನೀಡಿದೆ. ಇನ್ನು ಪ್ರಕರಣದ ತನಿಖೆಯನ್ನು ನಿವೃತ್ತ ಜಸ್ಟೀಸ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದೆ. ಇನ್ನು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ಎಫ್​ಐಆರ್​ಗಳ ವಿಚಾರಣೆಯನ್ನು ಸಿಐಡಿಗೆ ನೀಡಿದೆ.

ಆದಾಗ್ಯೂ ಈಗಾಗಲೇ ಕೆ.ಎಸ್.ಸಿ.ಎ ನಿಂದ ತಲಾ 5 ಲಕ್ಷ ರೂ. ಹಾಗೂ RCB ಯಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿತ್ತು. ಹೀಗೆ ಒಟ್ಟಾರೆ 25 ಲಕ್ಷ ರೂ. ಪರಿಹಾರ 11 ಕುಟುಂಬಗಳಿಗೆ ಸಿಗುತ್ತದೆ ಎಂದು ಖಾತ್ರಿಯಾಗಿತ್ತು. ಆದರೀಗ ಮತ್ತೆ ರಾಜ್ಯಸರ್ಕಾರದ ವತಿಯಿಂದ 10 ಲಕ್ಷ ರೂ.ಗೆ ಬದಲಿಗೆ 25 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಿದ ಕಾರಣ ಮೃತರಾದ 11 ಆರ್.ಸಿ.ಬಿ ಅಭಿಮಾನಿಗಳ ಕುಟುಂಬಗಳಿಗೆ ಒಟ್ಟು 40 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ ಜೂನ್ 4 ರಂದು ಐಪಿಎಲ್ ನೂತನ ಚಾಂಪಿಯನ್ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಲಾಠಿಚಾರ್ಜ್ ನಿಂದ ಕಾಲ್ತುಳಿತಕ್ಕೊಳಗಾಗಿ 11 ಆರ್.ಸಿ.ಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು.


Share It

You cannot copy content of this page