ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸಾವಿರಾರು ಲೀಟರ್ ಹಾಲಿನ ಟ್ಯಾಂಕರ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬುಕ್ಕಸಾಗರ ಗೇಟ್ ಬಳಿ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ಪಿಕಪ್ ವಾಹನದ ಮೇಲೆ ಹಾಲಿನ ಟ್ಯಾಂಕರ್ ಬಿದ್ದಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಆದರೆ ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ರಸ್ತೆಯಲ್ಲೇ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಯಿತು.