ಅಪರಾಧ ಸುದ್ದಿ

ಅಣ್ಣನ ಆಗಮನಕ್ಕೆ ಕಾದು ನಿಂತಿದ್ದ ಪುಟ್ಟ ಬಾಲಕಿ ಮೇಲೆ ಬಸ್ ಹರಿದು ಬಾಲಕಿ ಸಾವು

Share It

ಕಲಬುರಗಿ: ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ 3ವರ್ಷದ ಬಾಲಕಿ ಮೇಲೆ ಶಾಲಾ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ ತನ್ನ ಅಣ್ಣ ಬಂದಿದ್ದ ವೇಳೆ ಆತನನ್ನು ಕರೆದೊಯ್ಯಲು ತಂದೆಯ ಹಿಂದೆ ಖುಷಿ ಹೋಗಿದ್ದಳು. ಆದರೆ ತಂದೆ ಈಕೆ ಬಂದಿರುವುದನ್ನು ಗಮನಿಸಿರಲಿಲ್ಲ. ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ.

ಈ ವೇಳೆ ಖುಷಿಯ ತಲೆ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ಬಳಿಕ ಶಾಲಾ ವಾಹನ ಚಾಲಕ ಶ್ರೀಶೈಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Share It

You cannot copy content of this page