ರಾಜ್ಯಪಾಲರು V/S ರಾಜ್ಯ ಸರಕಾರ: ರಾಜ್ಯಪಾಲರಿಗೆ ಯಾವುದೇ ಮಾಹಿತಿ ಕೊಡದಂತೆ ಅಧಿಕಾರಿಗಳಿಗೆ ಸೂಚನೆ

Share It

ಬೆಂಗಳೂರು: ರಾಜ್ಯಪಾಲರು ಮೇಲಿಂದ ಮೇಲೆ ಅಸಹನೀಯ ವರ್ತನೆಯಲ್ಲಿ ಪತ್ರ ಬರೆಯುತ್ತಿದ್ದಾರೆ. ತಕ್ಷಣವೇ ಮಾಹಿತಿ ಕೇಳುತ್ತಿದ್ದಾರೆ. ಹೀಗಾಗಿ, ಅಧಿಕಾರಿಗಳು ಯಾವುದೇ ಮಾಹಿತಿಯನ್ನು ನೀಡದಂತೆ ಸರಕಾರ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆಯಲ್ಲಿ ಇಂತಹ ಮಹತ್ವದ ನಿರ್ಣಯ ತೆಗೆದುಕೊಂಡಿದ್ದು, ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೇಳಿದ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ನೇರವಾಗಿ ಕೊಡಬಾರದು ಎಂದು ತಾಕೀತು ಮಾಡಲಾಗಿದೆ.

ಎಲ್ಲ ನಿಯಾಮವಳಿ ಪರಿಶೀಲನೆ ಮಾಡಿ ಸಂಪುಟ ಯಾವುದೇ ಮಾಹಿತಿಯನ್ನು ರಾಜ್ಯಪಾಲರಿಗೆ ಕಳುಹಿಸುವ ಸಂದರ್ಭದಲ್ಲಿ ಕ್ಯಾಬಿನೆಟ್ ಮುಂದೆ ತಂದು ಒಪ್ಪಿಗೆ ಪಡೆಯಲು ಸೂಚನೆ ನೀಡಲಾಗಿದೆ.

ಈ ನಿಟ್ಟಿನಲ್ಲಿ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿರುವ ಸಚಿವ ಸಂಪುಟ, ತಮ್ಮ ಗಮನಕ್ಕೆ ಬರತೆ ಯಾವುದೇ ಮಾಹಿತಿಯನ್ನು ರಾಜಭವನದ ಜತೆಗೆ ಹಂಚಿಕೊಳ್ಳದಂತೆ ಸೂಚನೆ ನೀಡಿದೆ.


Share It

You May Have Missed

You cannot copy content of this page