ಹುಬ್ಬಳ್ಳಿ: ಡಕಾಯಿತಿ ಗ್ಯಾಂಗ್ ಸದಸ್ಯನ ಮೇಲೆ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ. ಸೋಮವಾರ ನಸುಕಿನ ಜಾವ ಮಹೇಶ್ ಮತ್ತು ಈತನ ಗ್ಯಾಂಗ್ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್ ಸೀತಾರಾಮ್ನನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಉಳಿದವರು ಪರಾರಿಯಾಗಿದ್ದಾರೆ.
ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಎಂದು ಪೊಲೀಸರನ್ನು ಕರೆದುಕೊಂಡು ಹೋದ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.
ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಮಹೇಶ್ನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ್ ಮತ್ತು ಪೇದೆ ವಸಂತ ಗುಡಿಗೇರಿಗೆ ಗಾಯವಾಗಿದೆ.