ಉಪಯುಕ್ತ ಸುದ್ದಿ

ಇಂದು ಪ್ರಜಾಪ್ರಭುತ್ವ ದಿನಾಚರಣೆ: ಚಾಮರಾಜನಗರದಿಂದಬೀದರ್ ವರೆಗೆ ಮಾನವ ಸರಪಳಿ

Share It

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ಐತಿಹಾಸಿಕ ಮಾನವ ಸರಪಳಿ ಆಂದೋಲನ ನಡೆಯಲಿದ್ದು, ಚಾಮರಾಜನಗರ ದಿಂದ ಬೀದರ್ ವರೆಗೆ ಮಾನವ ಸರಪಳಿ ನಿರ್ಮಾಣವಾಗಲಿದೆ.

ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಯ40 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ. ಈ ನಡುವೆ ಪ್ರಜಾಪ್ರಭುತ್ವ ದಿನದ ಸವಿನೆನಪಿಗಾಗಿ ಒಂದು ಲಕ್ಷ ಸಸಿಗಳನ್ನು ನೆಡಲಾಗುತ್ತದೆ. ಚಾಮರಾಜನಗರ ದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದ ಈ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಕೈಜೋಡಿಸಿವೆ. ಶಾಲಾ ಮಕ್ಕಳು, ಅಂಗನವಾಡಿ ಶಿಕ್ಷಕಿಯರು, ವಿವಿಧ ಇಲಾಖೆಗಳ ಸರಕಾರಿ ನೌಕರರು, ಕೆಲ ಸಂಘಟನೆಗಳ ಸದಸ್ಯರು, ಸ್ವಯಂ ಸೇವಕರು ಭಾಗವಹಿಸಲಿದ್ದಾರೆ.


Share It

You cannot copy content of this page