ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ರಾಜಕೀಯ ಬೆಳವಣಿಗೆ ಗಳ ಆಧಾರದಲ್ಲಿ ನೋಡಿದರೆ ಕೇಂದ್ರ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ. ಶೀಘ್ರದಲ್ಲೇ ಕೇಂದ್ರ ಸರಕಾರ ಪತನವಾಗುತ್ತದೆ ಎಂದರು.
ಆಂಧ್ರದಲ್ಲಿ ಚಂದ್ರಬಾಬು ನಾಯ್ಡು, ಬಿಹಾರದ ನಿತೀಶ್ ಕುಮಾರ್ ಯಾವಾಗ ಬೇಕಾದರೂ, ಸರಕಾರಕ್ಕೆ ಕೊಟ್ಟಿರುವ ಬೆಂಬಲ ವಾಪಸ್ ಪಡೆದುಕೊಳ್ಳಬಹುದು. ಹೀಗಾಗಿ, ಕೇಂದ್ರ ಸರಕಾರಕ್ಕೆ ಭವಿಷ್ಯ ಇಲ್ಲ ಎಂದರು.