ರಾಜಕೀಯ ಸುದ್ದಿ

ರಂಗೇರಿದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣಾ ಕಣ; ರಮೇಶ ಕತ್ತಿ, ವಿಶ್ವನಾಥ ಪಾಟೀಲ ನಾಮಪತ್ರ ಸಲ್ಲಿಕೆ

Share It

ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಮಂಗಳವಾರ ಇಬ್ಬರು ಪ್ರಮುಖ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದರು.

ಚಿಕ್ಕೋಡಿ ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ರಮೇಶ ಕತ್ತಿ ಹುಕ್ಕೇರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದರೆ, ಬೈಲಹೊಂಗಲ ಕ್ಷೇತ್ರದಿಂದ ಮಾಜಿ ಶಾಸಕ ಹಾಗೂ ಕೆಎಲ್ ಇ ಸಂಸ್ಥೆ ನಿರ್ದೇಶಕ ಡಾ. ವಿಶ್ವನಾಥ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ.

ಈ ಚುನಾವಣೆಯಲ್ಲಿ ಯಾವುದೇ ಪ್ಯಾನಲ್ ಇಲ್ಲ. ಆಯಾ ತಾಲೂಕಿನ ಮತದಾರರು ತಮಗೆ ಬೇಕಾದವರನ್ನು ಆಯ್ಕೆ ಮಾಡುತ್ತಾರೆ ಎಂದು ರಮೇಶ ಕತ್ತಿ ಹೇಳಿದರು.

ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು ಗೆದ್ದು ಬರುತ್ತೇನೆ ಎಂಬ ವಿಶ್ವಾಸ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದುವರೆಗೆ 40 ವರ್ಷಗಳ ಕಾಲ ಡಿಸಿಸಿ ಬ್ಯಾಂಕಿನಲ್ಲಿ ಸೇವೆ ಮಾಡಿದ್ದೇನೆ. ಐದು ವರ್ಷ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. 25 ವರ್ಷಗಳ ಕಾಲ ಬ್ಯಾಂಕಿನ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಎಲ್ಲಾ 16 ಜನ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಂಕಿನ ಪ್ರಗತಿ ಮಾಡಿದ್ದೇನೆ ಎಂದು ರಮೇಶ ಕತ್ತಿ ಹೇಳಿದರು.


Share It

You cannot copy content of this page