ಬೆಂಗಳೂರು:
“ನನ್ನ ಮೇಲೆ ಅಸೂಯೆಪಡುವುದರಿಂದ, ನನ್ನನ್ನು ಟೀಕೆ ಮಾಡುವುದರಿಂದ, ನನ್ನನ್ನು ಬಯ್ಯುವುದರಿಂದ ಕುಮಾರಸ್ವಾಮಿ ಅವರಿಗೆ ಖುಷಿಯಾಗಿ, ಅವರ ಆರೋಗ್ಯ ಸುಧಾರಣೆ ಆಗುವುದಾದರೆ ಅವರು ನನ್ನ ನಿಂದನೆ ಮುಂದುವರೆಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.
“ನಾನು ಕುಮಾರಸ್ವಾಮಿ ಅವರನ್ನು ಗಮನಿಸುತ್ತಿದ್ದೇನೆ. ಅವರು ತಮ್ಮ ಖುಷಿಗೆ ಮಾತಾಡುತ್ತಿದ್ದಾರೆ. ಅವರು ಏನಾದರೂ ಮಾತನಾಡಲಿ. ಇದರಿಂದ ಅವರಿಗೆ ಖುಷಿಯಾಗಿ ಆರೋಗ್ಯ ಸುಧಾರಣೆ ಆಗುವುದಾದರೆ ಆಗಲಿ. ಅವರ ಆರೋಗ್ಯ ಸುಧಾರಣೆಯಾಗುವುದು ನನಗೆ ಮುಖ್ಯ” ಎಂದು ಹೇಳಿದರು.