ರಾಜಕೀಯ ಸುದ್ದಿ

ಪಂಚಮಸಾಲಿ ಮೀಸಲಾತಿ ಸಂಬಂಧ ನಾಳೆ ಸಿಎಂ ನೇತೃತ್ವದಲ್ಲಿ ಸಭೆ

Share It

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಂಬಂಧ ಸಿಎಂ ನೇತೃತ್ವದಲ್ಲಿ ಶುಕ್ರವಾರ ಸಮುದಾಯದ ಮುಖಂಡರ ಸಭೆ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಡೆಯುವ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮುಖಂಡರು ಭಾಗಿಯಾಗಲಿದ್ದಾರೆ. ಕೂಡಲಸಂಗಮ ಕ್ಷೇತ್ರದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಭಾಗವಹಿಸಲಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟ ಬಹಳ ವರ್ಷಗಳಿಂದ ನಡೆಯುತ್ತಿದೆ. ಆದರೆ, ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಜಾಣ ಮೌನ ಪ್ರದರ್ಶನ ಮಾಡುತ್ತಿದೆ ಎಂಬುದು ಹೋರಾಟಗಾರರ ಆರೋಪವಾಗಿತ್ತು. ಈ ನಿಟ್ಟಿನಲ್ಲಿ ಮುಂದುವರಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದರು.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಸರಕಾರ ಮೀಸಲಾತಿ ಹೋರಾಟ ಸಮಿತಿ ಸದಸ್ಯರ ಜತೆಗೆ ಸಭೆ ನಡೆಸಲು ತೀರ್ಮಾನಿಸಿದೆ. ಸಭೆಯಲ್ಲಿ ಮೀಸಲಾತಿ ಜಾರಿಯ ಸಾಧಕಭಾದಕಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಸಿಎಂಗೆ ಹೋರಾಟಗಾರರು ಕೆಲವು ಸಲಹೆಗಳನ್ನು ನೀಡಲಿದ್ದಾರೆ‌. ಈ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.


Share It

You cannot copy content of this page