ಹಾಸನಾಂಬೆಯ ದರ್ಶನ ಮುಗಿಸಿ ಹೋಗುತ್ತಿದ್ದವರಿಗೆ ಅಪಘಾತ: ತಂದೆ ಮಗಳು ಸಾವು

Share It

ಹಾಸನ: ಹಾಸನಾಂಬೆಯ ದರ್ಶನ ಮುಗಿಸಿ ನಡೆದುಕೊಂಡು ತೆರಳುತ್ತಿದ್ದ ಭಕ್ತರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಹಾಸನದ ತಣ್ಣೀರಹಳ್ಳದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ತಂದೆ ಕುಮಾರ (38), ಮಗಳು ಕಾವ್ಯ (12) ಮೃತ ದುರ್ದೈವಿಗಳು. ಕುಮಾರ ಅವರ ಪತ್ನಿ ಪುಟ್ಟಮ್ಮ ಸ್ಥಿತಿ ಗಂಭೀರವಾಗಿದೆ.

ಆಲೂರು ತಾಲೂಕಿನ ಪಾಳ್ಯ ಹೋಬಳಿ ಎನ್​​ಎಚ್​ಪುರ ಗ್ರಾಮದ ಕುಮಾರ, ಗುರುವಾರ ರಾತ್ರಿ ಪತ್ನಿ ಪುಟ್ಟಮ್ಮ, ಮಗಳು ಕಾವ್ಯ ಜೊತೆ ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದರು. ಹಾಸನಾಂಬೆ ದೇವಿ ದರ್ಶನ ಪಡೆದು ವಿಜಯನಗರದಲ್ಲಿರುವ ಸಂಬಂಧಿಕರ ಮನೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿಹೊಡೆದಿದೆ.

ಸ್ಥಳದಲ್ಲೇ ಕುಮಾರ ಹಾಗೂ ಕಾವ್ಯ ಮೃತಪಟ್ಟಿದ್ದಾರೆ. ಗಾಯಾಳು ಪುಟ್ಟಮ್ಮನ ಸ್ಥಿತಿ ಗಂಭೀರವಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ.


Share It

You May Have Missed

You cannot copy content of this page