ಬೆಂಗಳೂರು: ಪರಸ್ಪರ ಕಿತ್ತಾಟದಿಂದ ಸರಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಬಹಿರಂಗವಾಗಿ ಈ ಇಬ್ಬರು ಅಧಿಕಾರಿಗಳು ಕಿತ್ತಾಡಿಕೊಂಡ ಹಿನ್ನೆಲೆಯಲ್ಲಿ ಸರಕಾರ ಈ ಇಬ್ಬರಿಗೆ ನಾನ್ ಎಕ್ಸಿಕ್ಯುಟಿವ್ ಹುದ್ದೆಗೆ ವರ್ಗಾವಣೆ ಮಾಡಿತ್ತು. ಇದೀಗ ಈ ಇಬ್ಬರು ಅಧಿಕಾರಿಗಳಿಗೆ ಒಂದೇ ದಿನ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.
ರೋಹಿಣಿ ಸಿಂಧೂರಿ ಅವರನ್ನು ಆಹಾರ ಸಂಸ್ಕರಣೆ ಮತ್ತು ಬೆಳೆ ಕೊಯ್ಲು ಕಾರ್ಯದರ್ಶಿ ಹುದ್ದೆಯಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಡಿ.ರೂಪಾ ಅವರನ್ನು ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಹುದ್ದೆಯಿಂದ ಬಿಎಂಟಿಎಫ್ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಇತ್ತೀಚೆಗಷ್ಟೇ ರೂಪಾ ಅವರನ್ನು ಎಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಮಾಡಲಾಗಿತ್ತು. ಹೀಗಾಗಿ, ಅವರನ್ನು ಎಡಿಜಿಪಿ ಹುದ್ದೆಗೆ ನೇಮಿಸಲಾಗಿದೆ.