ಮಾಜಿ ಸೈನಿಕರಿಗೆ ಸರಕಾರದ ಗುಡ್ ನ್ಯೂಸ್: ಸರಕಾರದಿಂದಲೇ ಲೇಔಟ್ ನಿರ್ಮಿಸಿ ಸೈಟ್ ಹಂಚಿಕೆ

Share It


ಬೆಳಗಾವಿ: ರಾಜ್ಯ ಸರಕಾರ ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಲೇಔಟ್ ನಿರ್ಮಾಣ ಮಾಡಿ ನಿವೇಶನ ಹಂಚಿಕೆ ಮಾಡಲು ತೀರ್ಮಾನಿಸಿದೆ‌.

ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿದೆ. ಆದರೂ ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ರಾಜ್ಯದಲ್ಲಿ ಪ್ರಸ್ತುತ 16,065 ಮಾಜಿ ಸೈನಿಕರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6,783 ಅರ್ಜಿ ವಿಲೇವಾರಿ ಮಾಡಿದ್ದು, 9,282  ಅರ್ಜಿಗಳು ಬಾಕಿ ಇವೆ ಎನ್ನಲಾಗಿದೆ.


Share It
Previous post

ಡಿಎಸ್‌ಪಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ದಸಂಸ ತಾಲೂಕು ಮಹಿಳಾ ಅಧ್ಯಕ್ಷೆೆ ಗಂಗಾ ಮಾದರ:

Next post

ಹಿಂದೂ ದೇವಾಲಯಗಳ ಆಸ್ತಿಗೆ ಸರಕಾರದ ಶ್ರಿ ರಕ್ಷೆ: ಸಚಿವ ರಾಮಲಿಂಗಾ ರೆಡ್ಡಿ ಬದ್ಧತೆಯಿಂದ ಉಳಿಯಿತು 10,700 ಎಕರೆ ‘ದೇವರ ಆಸ್ತಿ’

You May Have Missed

You cannot copy content of this page