ಉಪಯುಕ್ತ ಸುದ್ದಿ

ಮೇ.26 ರವರೆಗೆ ರಾಜ್ಯದಲ್ಲಿ ಭಾರಿ ಮಳೆ: ಮೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್

Share It

ಬೆಂಗಳೂರು: ಮಾನ್ಸೂನ್ ಮಾರುತಗಳು ರಾಜ್ಯಕ್ಕೆ ಕಾಲಿಡುವ ಮೊದಲೇ ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಸುರಿಯುತ್ತಿದ್ದು, ಮೇ. 26 ರಬರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಕೂಡ ಮಾಡಲಾಗಿದೆ. ಇದು ಮುಂದಿನ ಐದು ದಿನಗಳ ಕಾಲ ಜಾರಿಯಲ್ಲಿರಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳಲ್ಲಿ40 ರಿಂದ 50 ಕೀ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.


Share It

You cannot copy content of this page