ಬೆಂಗಳೂರು: ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ವಾಕಿಂಗ್ಗೆ ಹೋಗುತ್ತಿದ್ದಾಗ ಸುಳಿಗೆಕೋರರ ದಾಳಿ ಮಾಡಿ ಚಿನ್ನಾಭರಣ ದೋಚಿದ್ದವರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಹೆಬ್ಬಾಳದ ವೆಟರ್ನರಿ ಆಸ್ಪತ್ರೆ ಆವರಣದಲ್ಲಿ ಸುಬ್ಬಣ್ಣ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮಾಸ್ಕ್ ಧರಿಸಿದ್ದ ಇಬ್ಬರು ಆಗಂತುಕರು ಸುಬ್ಬಣ್ಣ ಮೇಲೆ ದಾಳಿ ಮಾಡಿದ್ದರು. ಚಾಕು ತೋರಿಸಿ ಕತ್ತಿನಲ್ಲಿದ್ದ ಸರ ಕಸಿದುಕೊಂಡಿದ್ದರು. ಆಗಂತುಕರ ಈ ದಾಳಿ ತಡೆಯಲು ಮುಂದಾದ ಸುಬ್ಬಣ್ಣ ಕೈಗೆ ಚಾಕುವಿನಿಂದ ಹಲ್ಲೆ ಕೂಡ ಮಾಡಿದ್ದಾರೆ.
ಬಳಿಕ ಕೈಯಲ್ಲಿದ್ದ ಚಿನ್ನದ ಬ್ರೇಸ್ ಲೇಟ್ ಕಿತ್ಕೊಂಡು ಕ್ಷಣಮಾತ್ರದಲ್ಲಿ ಎಸ್ಕೇಪ್ ಆಗಿದ್ದರು. ಬಳಿಕ ಸುಬ್ಬಣ್ಣ ಸಂಜಯ್ ನಗರ ಪೊಲೀಸ್ ಠಾಣೆಗೆ ರಾಬರಿ ಬಗ್ಗೆ ದೂರು ನೀಡಿದ್ದು, ಪೊಲೀಸರು ಡಿಜೆ ಹಳ್ಳಿಯ ಮೂವರು ರಾಬರ್ಸ್ಗಳನ್ನ ಹೆಡೆಮುರಿ ಕಟ್ಟಿದ್ದಾರೆ.
ಮೊಹಮ್ಮದ್ ಸಲ್ಮಾನ್, ಮೋಸೀನ್, ಮೊಹಮ್ಮದ್ ಇರ್ಫಾನ್ ಬಂಧಿತರು. ಒಂದೇ ಏರಿಯಾದ ಈ ಮೂವರಲ್ಲಿ ಮೋಸಿನ್ ಮತ್ತು ಇರ್ಫಾನ್ ರಾಬರಿ ಮಾಡಿದರೆ, ಸಲ್ಮಾನ್ ತಾನು ಕದ್ದ ಬೈಕ್ನಲ್ಲಿ ಇನ್ನಿಬ್ಬರಿಗೆ ಸಹಾಯ ಮಾಡಿದ್ದ. ಹೀಗಾಗಿ ಮೂರು ಜನರನ್ನ ಬಂಧಿಸಿರುವ ಪೊಲೀಸರು ಆರೋಪಿಗಳನ್ನ ಜೈಲಿಟ್ಟಿದ್ದಾರೆ.