ದಾವಣಗೆರೆ: ಯುವಕನ ರಕ್ಷಣೆಗೆ ಹೋಗಿ ಇಬ್ಬರು ನೀರುಪಾಲು

Share It

ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನೊಬ್ಬನ ರಕ್ಷಣೆಗೆ ಧಾವಿಸಿದ ಇಬ್ಬರು ನೀರುಪಾಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿಯ ಬಳಿ ನಡೆದಿದೆ.

ಮೃತರನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ರಾಮಕೃಷ್ಣ ಹಾಗೂ ….ಎಂದು ಗುರಿತಿಸಲಾಗಿದೆ. ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಮತ್ತೊಬ್ಬ ಯುವಕನ ರಕ್ಷಣೆಗೆ ಈ ಇಬ್ಬರು ಇಳಿದಿದ್ದು, ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ.

ರಾಮಕೃಷ್ಣ ಶವ ಪತ್ತೆಯಾಗಿದ್ದು, ಮತ್ತೊಬ್ಬ ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹದಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.


Share It

You May Have Missed

You cannot copy content of this page