ಅಪರಾಧ ಸುದ್ದಿ

ಕೊಪ್ಪಳ ನಗರಸಭೆ ಕಚೇರಿಗೆ ಲೋಕಾ ದಾಳಿ

Share It

ಕೊಪ್ಪಳ: ಕೊಪ್ಪಳ ನಗರಸಭೆ ಕಚೇರಿ ಸೇರಿ 5 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೊಪ್ಪಳ ಲೋಕಾಯುಕ್ತ ಡಿವೈಎಸ್​​ಪಿ ವಸಂತಕುಮಾರ ನೇತೃತ್ವದಲ್ಲಿ, ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ಉಜ್ಚಲ, ಗುತ್ತಿಗೆದಾರರಾದ ಶಕೀಲ ಪಟೇಲ್ (ನಗರಸಭೆ ಅಧ್ಯಕ್ಷನ ಸಹೋದರ), ಪ್ರವೀಣ ಕಂದಾರಿ ಮನೆಯ ಮೇಲೆ ಕೂಡ ದಾಳಿ ನಡೆದಿದೆ.

2023-24ನೆಯ ಸಾಲಿನ ನಗರಸಭೆಯ ಅನುದಾನದಲ್ಲಿ ದುರ್ಬಳಕೆ ಆರೋಪ ಸಂಬಂಧ ಈ ದಾಳಿ ನಡೆದಿದೆ. 336 ಕಾಮಗಾರಿಗಳಲ್ಲಿ ಸುಮಾರು 10 ಕೋಟಿ ರೂಪಾಯಿ ದುರ್ಬಳಕೆ ಮಾಡಿರುವ ಆರೋಪ ವ್ಯಕ್ತವಾಗಿತ್ತು. ಅರ್ಧಂಬರ್ಧ ಕಾಮಗಾರಿ, ಕೆಲ ಕಡೆ ಕಾಮಗಾರಿ ಮಾಡದೆ ಹಣ ಬಳಸಿರುವ ಆರೋಪ ಕೇಳಿಬಂದಿತ್ತು.

ಅನುದಾನ ದುರ್ಬಳಕೆ ಆರೋಪ: ಕೊಪ್ಪಳ ನಗರಸಭೆಯಲ್ಲಿ ಆಡಳಿತಾತ್ಮಕ ಭ್ರಷ್ಟಾಚಾರದ ಆರೋಪಗಳು ಹಿಂದಿನಿಂದಲೂ ಕೇಳಿಬಂದಿದ್ದವು. ೨೦೨೩-೨೪ರಲ್ಲಿ ನಗರದ ಅಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನವನ್ನು ಸರಿಯಾಗಿ ಬಳಕೆ ಮಾಡದಿರುವ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಕಾಮಗಾರಿಗಳ ಗುಣಮಟ್ಟ, ಪೂರ್ಣಗೊಳ್ಳದ ಯೋಜನೆಗಳು ಮತ್ತು ಹಣದ ದುರುಪಯೋಗದ ಆರೋಪಗಳು ಲೋಕಾಯುಕ್ತದ ಗಮನಕ್ಕೆ ಬಂದವು. ಈ ಆರೋಪಗಳನ್ನು ಆಧರಿಸಿ, ಲೋಕಾಯುಕ್ತ ಡಿವೈ ಎಸ್ಪಿ ವಸಂತಕುಮಾರ್ ಅವರ ನೇತೃತ್ವದಲ್ಲಿ ದಾಳಿಯನ್ನು ಯೋಜಿಸಲಾಯಿತು. ದಾಳಿಯ ಸಂದರ್ಭದಲ್ಲಿ, ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.


Share It

You cannot copy content of this page