ವಾಟೆಹೊಳೆ ಜಲಪಾತಕ್ಕೆ ಬಿದ್ದು ಇಬ್ಬರು ಯುವಕರು ನೀರುಪಾಲು

Share It

ಶಿರಸಿ: ಪ್ರವಾಸಕ್ಕೆ ಬಂದಿದ್ದ ಯುವಕರು ಕಾಲುಜಾರಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ವಾಟೆಹೊಳೆ ಜಲಾಶಯದಲ್ಲಿ ನಡೆದಿದೆ.

ಸಿದ್ದಾಪುರ ಸಮೀಪದ ವಾಟೆಹೊಳೆ ಜಲಾಶಯದಲ್ಲಿ ಪ್ರವಾಸಕ್ಕೆ ಬಂದಿದ್ದ ಆರು ಯುವಕರು ಈಜಲು ಹೋಗಿದ್ದರು. ಈ ವೇಳೆ ಜಾರಿಬಿದ್ದು, ಸುಹಾಸ್ ಶೆಟ್ಟಿ ಹಾಗೂ ಅಕ್ಷಯ್ ಭಟ್ ಎಂಬ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಯುವಕರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿರಸಿಯ ಆಸ್ಪತ್ರೆಗೆ ಕಳುಹಿಸಲಾಗಿದೆ.


Share It

You May Have Missed

You cannot copy content of this page