ರಾಜಕೀಯ ಸುದ್ದಿ

ನಾಗಮಂಗಲ: ಗಣೇಶ ಗಲಭೆಗೆ ಸಾಕ್ಷಿಯಾಗಿದ್ದ ಸಿಸಿಟಿವಿಗೆ ಕಲ್ಲೆಸೆತ!

Share It

ಮಂಡ್ಯ: ಜಿಲ್ಲೆಯ ನಾಗಮಂಗಲ ಕೋಮು ಗಲಭೆಗೆ ಮೊದಲೇ ಸಂಚು ಹೂಡಿದ್ದ ಘಟನೆಗೆ ಸಂಬಂಧಿತ ಒಂದೊಂದು ವಿಡಿಯೋಗಳೇ ಸಾಕ್ಷಿ ಹೇಳುತ್ತಿವೆ. ಗಲಭೆಯ ರಹಸ್ಯಗಳು ದಿನೇ ದಿನೇ ಬಯಲಾಗುತ್ತಲೇ ಇವೆ. ಕಿಡಿಗೇಡಿಗಳು ಅಟ್ಟಹಾಸ ಮೆರೆಯುತ್ತಿದ್ದರೂ ಪೊಲೀಸರೇ ಅಸಹಾಯಕರಾಗಿ ನಿಂತಿರುವ ವಿಡಿಯೋ ಸೋಮವಾರ ಬಯಲಾಗಿತ್ತು. ಇದೀಗ ಗಲಭೆ ವೇಳೆ ಸಾಕ್ಷ್ಯನಾಶಕ್ಕೆ ಯತ್ನಿಸಿರುವ ಮತ್ತೊಂದು ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಿಡಿಗೇಡಿಗಳು ಮೊದಲೇ ಸಿದ್ಧತೆ ಮಾಡಿಕೊಂಡು ಏಕಾಏಕಿ ಪಾತ್ರೆ ಅಂಗಡಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಸಿಸಿಟಿವಿ ದೃಶ್ಯದಿಂದ ಬಯಲಾಗಿದೆ. ಸೆಪ್ಟೆಂಬರ್ 11ರ ರಾತ್ರಿ 10.47ರ ಸುಮಾರಿಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವತ್ತು ಕಿಡಿಗೇಡಿಗಳ ಕೃತ್ಯಕ್ಕೆ ಇಡೀ ಪಾತ್ರೆ ಅಂಗಡಿಯೇ ಭಸ್ಮ ಆಗಿತ್ತು.

ನಾಗಮಂಗಲ ಗಲಭೆ ಪೂರ್ವನಿಯೋಜಿತ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ದುಷ್ಕರ್ಮಿಗಳು ಯಾವಾಗ ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾರೆ. ಈ ಕೃತ್ಯ ಯಾರಿಗೂ ಗೊತ್ತಾಗಬಾರದು ಎಂದು ಸಾಕ್ಷ್ಯನಾಶಕ್ಕೆ ಯತ್ನಿಸಿದ್ದಾರೆ. ಬೆಂಕಿ ಹಚ್ಚುವ ವೇಳೆ ಸಿಸಿಟಿವಿಗೂ ಕಲ್ಲೆಸೆದು ಅಟ್ಟಹಾಸ ಮೆರೆದಿದ್ದಾರೆ.


Share It

You cannot copy content of this page