ಅಪರಾಧ ಸಿನಿಮಾ ಸುದ್ದಿ

ಕೊಲೆಯಾದ ರೇಣುಕಾಸ್ವಾಮಿಗೆ ಗಂಡು ಮಗು ಜನನ: ನಮ್ಮ ಮಗನೇ ಹುಟ್ಟಿಬಂದ ಎಂದ ಪೋಷಕರು

Share It

ಚಿತ್ರದುರ್ಗ: ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮನೀಡಿದ್ದಾರೆ.

ಮಗನನ್ನು ಕಳೆದುಕೊಂಡು ಮೂರು ತಿಂಗಳಿಂದ ನೋವಿನಲ್ಲಿರುವ ಕುಟುಂಬ ಇದೀಗ ತಮ್ಮ ಮಗನೇ ಹುಟ್ಟಿಬಂದಿದ್ದಾನೆ ಎಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ‌. ಈ ನಡುವೆ ಮಗುವಿಗೆ ತಂದೆಯಿಲ್ಲವಲ್ಲ ಎಂಬ ಕೊರಗೊಂದು ನಮ್ಮನ್ನು ಕಾಡುತ್ತಿದೆ ಎಂದು ಕುಟುಂಬಸ್ಥರು ನೊಂದುಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಜೈಲಿನಲ್ಲಿದ್ದಾರೆ. ಮೂರು ತಿಂಗಳಾದರೂ ನಟ ದರ್ಶನ್ ಗೆ ಜಾಮೀನು ಸಿಕ್ಕಿಲ್ಲ. ರೇಣುಕಾಸ್ವಾಮಿ ಕೊಲೆಯಾದಾಗ ಆತನ ಪತ್ನಿ ಆರು ತಿಂಗಳ ಗರ್ಭಿಣಿಯಾಗಿದ್ದರು. ಇದು ಇಡೀ ರಾಜ್ಯವೇ ಆತನ ಬಗ್ಗೆ ಮರುಗುವಂತೆ ಮಾಡಿತ್ತು.

ಇದೀಗ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕುಟುಂಬಕ್ಕೆ ಕೊಂಚ ನೆಮ್ಮದಿ ತಂದಿದೆ. ಇನ್ನು ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿರುವ ದರ್ಶನ್ ಹೊರಬರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ‌. ಅವರ ಜಾಮೀನು ಅರ್ಜಿ ತಿರಸ್ಕಾರವಾಗಿದ್ದು, ಮುಂದೇನು ಎಂಬ ಚಿಂತೆ ಅವರನ್ನು ಕಾಡುತ್ತಿದೆ.


Share It

You cannot copy content of this page