ಅಪರಾಧ ಸುದ್ದಿ

ಘಟಪ್ರಭಾ ನದಿ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

Share It

ಬೆಳಗಾವಿ : ಘಟಪ್ರಭಾ ನದಿಯ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಲ್ಲಪ್ಪ ಲಾಳಿ (55) ಹಾಗೂ ಪತ್ನಿ ಮಾದೇವಿ ಲಾಳಿ (50) ಮೃತರು. ಡೆತ್ ನೋತ್ ಬರೆದಿಟ್ಟು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳಕ್ಕೆ, ಅವಮಾನಕ್ಕೆ ಮನನೊಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಂಪತಿ ಮೆಟಗುಡ್ಡದಲ್ಲಿ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಸಾಲ ಮಾಡಿದ್ದರು. ಸಾಲಗಾರರು ಮನೆ ಬಳಿ ಬಂದು ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದರು.

ಇದರಿಂದ ನೊಂದ ದಂಪತಿ ಡೆತ್ ನೋಟ್ ಬರೆದು ಮುಧೋಳದ ಯಾದವಾಡ ರಸ್ತೆಯಲ್ಲಿ ಘಟಪ್ರಭಾ ನದಿ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.


Share It

You cannot copy content of this page