ಬೆಂಗಳೂರು : ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಹೇಮಾವತಿ ನದಿ ಕೆನಾಲ್ ಯೋಜನೆಗೆ ಅಡ್ಡಿಪಡಿಸುವ ಕೆಲಸವಾಗಬಾರದು ಎಂದರು.