ಅಪರಾಧ ಸುದ್ದಿ

ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ನಾಲ್ವರು ಬಲಿ

Share It

ಕಾರ್ಕಳ : ಕಾರ್ಕಳ-ಧರ್ಮಸ್ಥಳ- ಸುಬ್ರಮಣ್ಯ ಹೆದ್ದಾರಿಯ ಹೆಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಸಂಭವಿಸಿದ ಮಿನಿ ಲಾರಿ ಮತ್ತು ಬೈಕ್ ಅಪಘಾತದಲ್ಲಿ ನಾಲ್ವರು ಮೃತ ಪಟ್ಟಿದ್ದಾರೆ‌.

ಮೃತರನ್ನು ಸುರೇಶ ಆಚಾರ್ಯ (36), ಮಕ್ಕಳಾದ ಸಮೀಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ ಅವರ ಪತ್ನಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಲ್ಲೂರು ಗ್ರಾಮದ ಕೊಡಪಟ್ಯಾ ಮನೆಯವರು. ಇವರು ವೇಣೂರಿನಿಂದ ನಲ್ಲೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.


Share It

You cannot copy content of this page