ಬೆಂಗಳೂರು: ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಇರಲಿದೆ.
ಕುಂದಾಪುರ, ಎಂಎಂ ಹಿಲ್ಸ್, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಕ್ಯಾಸಲ್ರಾಕ್, ಆಗುಂಬೆ, ಚಾಮರಾಜನಗರ, ಕಾರವಾರ, ಬೇಲಿಕೇರಿ, ಶಿರಾಲಿ, ಗಂಗಾವತಿ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು, ಕೋಲಾರದಲ್ಲಿ ಮಂಗಳವಾರ ಮಳೆಯಾಗಿದೆ.