ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸುವ ಎಚ್ಚರಿಕೆ

Share It

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸ ಸಮಾರಂಭದಲ್ಲಿ ಮಾತನಾಡಿದ ಅವರು, ಅಮಾಯಕರಿಗೆ ಹಾನಿಗಳಾಗದಂತೆ ಎಚ್ಚರಿಕೆ ವಹಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಕೆಲವರು ಹೇಳಿಕೆ ನೀಡುತ್ತಿದ್ದಾರೆ. ಇದು ದೌರ್ಜನ್ಯವಲ್ಲ. ಇದು ನ್ಯಾಯ ಒದಗಿಸುತ್ತಿರುವುದು ಎಂದು ನಾನು ನಂಬುತ್ತೇನೆ, ಈ ಕ್ರಮ ಭವಿಷ್ಯದಲ್ಲಿಯೂ ಮುಂದುವರೆಯುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದೂ ಹೇಳಿದರು. ಈಗಾಗಲೇ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಭರವಸೆ ನೀಡಿದ್ದಾರೆ.

ಸಂಸತ್ತಿನಲ್ಲಿ ಯಾವುದೇ ಹೇಳಿಕೆ ನೀಡಿದ್ದರೂ ಅದಕ್ಕೆ ಸರ್ಕಾರ ಒಪ್ಪಿಕೊಳ್ಳಬೇಕು. ಸಂಸತ್ತಿನ ಅಧಿವೇಶನದಲ್ಲಿ ಸರ್ಕಾರ ನೀಡುವ ಆಶ್ವಾಸನೆ ಪೂರ್ವದಿಂದ ಸೂರ್ಯ ಉದಯಿಸುವುದೆಷ್ಟು ಸತ್ಯವೋ ಅಷ್ಟೇ ಸತ್ಯವಾಗಿರುತ್ತದೆ ಎಂದರು.

ಏತನ್ಮಧ್ಯೆ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ವಿಧಾನಸಭೆಯಲ್ಲಿ ಸಂತಾಪ ಸೂಚಿಸುವ ಸಂದರ್ಭದಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಕಾಶ್ಮೀರದ ಬಗ್ಗೆ ಹೊಂದಿದ್ದ ದೃಷ್ಟಿಕೋನವನ್ನು ಶ್ಲಾಘಿಸಿದರು.


Share It

You May Have Missed

You cannot copy content of this page