ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್ ಕಡಿತ ಇರಲ್ಲ: ಇಂಧನ ಸಚಿವ ಜಾರ್ಜ್

Share It

ಪ್ರಸ್ತುತ ಬೇಸಿಗೆ ಕಾಲದಲ್ಲಿ ರಾಜ್ಯದ ವಿದ್ಯುತ್ ಬೇಡಿಕೆಯು ಕಳೆದ ವರ್ಷಕ್ಕಿಂತ ಈ ವರ್ಷ 2 ಸಾವಿರ ಮೆಗಾ ವ್ಯಾಟ್ ಹೆಚ್ಚಾಗಿದೆ. ಇಷ್ಟಾದರೂ ಸಹ ಈ ಬೇಸಿಗೆಯಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ವಿದ್ಯುತ್ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಈ ಬೇಸಿಗೆಯಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ವಿದ್ಯುತ್ ಬೇಡಿಕೆ ಇರುವುದು ನಿಜ. ಆದರೆ ಇದನ್ನು ನಿಭಾಯಿಸಲು ಇಂಧನ ಇಲಾಖೆ ಸಜ್ಜಾಗಿದೆ. ಇದಕ್ಕಾಗಿ ಬೇಸಿಗೆಯಲ್ಲಿ ರಾಜ್ಯದಲ್ಲಿ ಒಟ್ಟು 19 ಸಾವಿರ ಮೆಗಾ ವ್ಯಾಟ್ ನಷ್ಟು ವಿದ್ಯುತ್ ಒದಗಿಸಲು ಇಂಧನ ಇಲಾಖೆ ಸಿದ್ಧವಾಗಿದೆ.

ಇದಕ್ಕಾಗಿ ಉತ್ತರಪ್ರದೇಶ, ಪಂಜಾಬ್ ರಾಜ್ಯಗಳಿಂದ ವಿನಿಮಯ ಆಧಾರದಲ್ಲಿ ವಿದ್ಯುತ್ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ವಿದ್ಯುತ್ ಕಡಿತ ಇರುವುದಿಲ್ಲ” ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಸ್ಪಷ್ಟಪಡಿಸಿದ್ದಾರೆ.


Share It

You cannot copy content of this page