ಉಪಯುಕ್ತ ಸುದ್ದಿ

ಮಾ. ೨೨ ರ ಬಂದ್ ಗೆ ಬೆಂಬಲ ನೀಡುವಂತೆ ಮನವಿ: ವಾಟಾಳ್ ನಾಗರಾಜ್ ವಶಕ್ಕೆ ಪಡೆದ ಪೊಲೀಸರು

Share It

ಬೆಂಗಳೂರು: ಮಾರ್ಚ್ ೨೨ ರಂದು ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿ ರ‍್ಯಾಲಿ ನಡೆಸುತ್ತಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ ೨೨ರಂದು ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಲಾಗಿದೆ. ಈ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಮತ್ತಷ್ಟು ಜನರ ಬೆಂಬಲ ಯಾಚಿಸಿ, ರ‍್ಯಾಲಿ ನಡೆಸಿದ ವಾಟಾಳ್ ನಾಗರಾಜ್, ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದರು.

ಈ ವೇಳೆ ಪೊಲೀಸರು ಅವರನ್ನು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಬಂದ್ ನಡೆಸುವುದು ಶತಸಿದ್ಧ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದು, ಕೆಲವು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದ್ದರೆ, ಮತ್ತೇ ಕೆಲವು ಸಂಘಟನೆಗಳು ಬಾಹ್ಯ ಬೆಂಬಲ ಸೂಚಿಸಿವೆ.


Share It

You cannot copy content of this page