ಅಪರಾಧ ಸಿನಿಮಾ ಸುದ್ದಿ

ದರ್ಶನ್‌ಗೆ ಬಳ್ಳಾರಿ ಜೈಲಿನಲ್ಲೇ ಬೆನ್ನುನೋವಿಗೆ ಚಿಕಿತ್ಸೆ

Share It

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಬಳ್ಳಾರಿ ಜೈಲಿನಲ್ಲಿಯೇ ಬೆನ್ನುನೋವಿನ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಟ ದರ್ಶನ್ ಜಾಮೀನು ಅರ್ಜಿ ತಿರಸ್ಕಾರಗೊಂಡ ಬೆನ್ನಲ್ಲೇ ದರ್ಶನ್ ಬೆನ್ನುನೋವಿನ ಕಾರಣ ನೀಡಿ ಬೆಂಗಳೂರು ಜೈಲಿಗೆ ಶಿಫ್ಟ್ ಆಗುವ ಪ್ರಯತ್ನ ನಡೆಸಿದ್ದರು. ಆದರೆ, ನ್ಯಾಯಾಲಯ ದರ್ಶನ್ ಅವರ ಯಾವುದೇ ಮನವಿಗೆ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಬೆನ್ನುನೋವಿಗೆ ಚಿಕಿತ್ಸೆ ಪಡೆಯದೆ ಹಠ ಹಿಡಿದಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಮ್ಸ್ ಆಸ್ಪತ್ರೆ ವೈದ್ಯರು ಬಳ್ಳಾರಿ ಜೈಲಿನಲ್ಲಿಯೇ ಚಿಕಿತ್ಸೆ ಆರಂಭಿಸಿದ್ದಾರೆ. ನೆನ್ನೆಯಷ್ಟೇ ದರ್ಶನ್ ಮಲಗುವ ಕೋಣೆಗೆ ಮೆಡಿಕಲ್ ಬೆಡ್ ಪೂರೈಕೆ ಮಾಡಲಾಗಿತ್ತು. ಇಂದು ಬೆಳಗ್ಗೆ ವೈದ್ಯರು ಆಗಮಿಸಿ ಚಿಕಿತ್ಸೆ ಆರಂಭಿಸಿದ್ದಾರೆ.

ಈ ನಡುವೆ ದರ್ಶನ್ ಪರ ವಕೀಲರು ಹೈಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿಗೆ ಶಿಫ್ಟ್ ಮಾಡುವ ಕೋರಿಕೆಯನ್ನು ಸಹ ದರ್ಶನ್ ಪರ ವಕೀಲರು ಮಾಡಿಕೊಂಡಿದ್ದು, ಸಧ್ಯಕ್ಕೆ ಜೈಲಿನಲ್ಲಿಯೇ ಚಿಕಿತ್ಸೆ ನಡೆಸಲಾಗುತ್ತಿದೆ.


Share It

You cannot copy content of this page