ಕ್ರೀಡೆ ಸುದ್ದಿ

ಬೆಂಗಳೂರಿನ ಹೃದಯಭಾಗದಲ್ಲಿ ಫುಲ್ ಟ್ರಾಫಿಕ್ ಜಾಮ್

Share It

ಬೆಂಗಳೂರು: ಆರ್‌ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೃದಯ ಭಾಗದಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ಮೆಜೆಸ್ಟಿಕ್, ಕೆ.ಆರ್.ವೃತ್ತ, ಕಬ್ಬನ್ ಪಾರ್ಕ್ ಸುತ್ತಮುತ್ತ ಸಂಚಾರದಟ್ಟಣೆ ಉಂಟಾಗಿದೆ.

ಆರ್‌ಸಿಬಿ ಮತ್ತು ಕೊಲ್ಕಾತ್ತಾ ನಡುವೆ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಾಕಿಸ್ತಾನದ ವಿರುದ್ಧದ ಯುದ್ಧದ ಕಾರಣಕ್ಕೆ ಪಂದ್ಯಾವಳಿಯನ್ನೇ ಸ್ಥಗಿತಗೊಳಿಸಲಾಗಿತ್ತು. ಆದರೆ, ಕದನ ವಿರಾಮ ಘೋಷಣೆ ಬೆನ್ನಲ್ಲೇ ಮತ್ತೇ ಪಂದ್ಯಾವಳಿಗಳನ್ನು ಆರಂಭಿಸಲು ಬಿಸಿಸಿಐ ತೀರ್ಮಾನಿಸಿದೆ.

ತೀರ್ಮಾನದಂತೆ ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಹೆಚ್ಚಿನ ಪ್ರೇಕ್ಷಕರು ಆಗಮಿಸುತ್ತಿದ್ದು, ಇದರಿಂದಾಗಿ ವಾಹನ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ, ನಗರದ ಹೃದಯಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ.


Share It

You cannot copy content of this page