ರಾಜಕೀಯ ಸುದ್ದಿ

ಹನಿಟ್ರ್ಯಾಪ್ ಹಾಲಾಹಲ: ರಾಜಕೀಯದಲ್ಲಿ ಕೋಲಾಹಲ

Share It

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೇ ಹನಿಟ್ರ್ಯಾಪ್ ಹಾಲಾಹಲ ಶುರುವಾಗಿದ್ದು, ರಾಜಕೀಯ ವಲಯದಲ್ಲಿ ಕೋಲಾಹಲ ಶುರುವಾಗಿದೆ.

ರಾಜ್ಯ ಸರಕಾರದ ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದ್ದು, ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಆ ಪ್ರಭಾವಿ ಸಚಿವರು ಯಾರು ಎಂಬುದು ಇದೀಗ ಚರ್ಚೆಯ ವಿಷಯವಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿ, ಹನಿಟ್ರ್ಯಾಪ್ ನಡೆದಿರುವ ಬಗ್ಗೆ ನಮಗೂ ಮಾಹಿತಿ ಬಂದಿದೆ. ಆದರೆ, ಯಾವ ಸಚಿವರು ಎಂಬ ಬಗ್ಗೆ ಮಾಹಿತಿಯಿಲ್ಲ. ಹನಿಟ್ರ್ಯಾಪ್ ದೊಡ್ಡ ಷಡ್ಯಂತ್ರವಾಗಿದ್ದು, ಆ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದ್ದರು.

ಕೆ.ಜೆ. ಜಾರ್ಜ್ ಮಾತನಾಡಿ, ನನಗೆ ಹನಿಟ್ರ್ಯಾಪ್ ಅಂದ್ರೆ ಏನೂ ಅಂತ ಗೊತ್ತಿಲ್ಲ. ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವ ಪ್ರಶ್ನೆಯೂ ಇಲ್ಲ ಎಂದು ತಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್ ಬಗ್ಗೆ ಕಿಡಿಕಾರಿದ್ದಾರೆ.

ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿಯೇ ರಮೇಶ್ ಜಾರಕಿಹೊಳಿ ಸಿಲುಕಿ ರಾಜೀನಾಮೆ ನೀಡಿದ್ದರು. ಇಂತಹ ಪರಿಸ್ಥಿತಿಯನ್ನು ಸೃಷ್ಟಿಸುವ ಸಲುವಾಗಿಯೇ ಹನಿಟ್ರ್ಯಾಪ್ ನಂತಹ ಪ್ರಯತ್ನಗಳು ನಡೆಯುತ್ತವೆ. ಇದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಾರ್ವಜನಿಕ ಜೀವನದಲ್ಲಿರುವವರಿಗೆ ಕಷ್ಟವಾಗಲಿದೆ ಎಂಬ ಒತ್ತಾಯ ಕೇಳಿ ಬಂದಿದೆ.


Share It

You cannot copy content of this page