ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿ ಸಿಸಿಬಿ ಪೊಲೀಸರು ದಾಳಿ ಮಾಡಿ, ತಪಾಸಣೆ ವೇಳೆ ವಿಲ್ಸನ್ ಗಾರ್ಡನ್ ನಾಗ ಮತ್ತು ಆತನ ಸಹಚರರಿಂದ ಶನಿವಾರ ಸುಮಾರು 18 ಮೊಬೈಲ್ಫೋನ್ ವಶಕ್ಕೆ ಪಡೆದಿದ್ದಾರೆ.
ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ ಜೈಲಿನಿಂದಲೇ ಧಮ್ಕಿ ಹಾಕುತ್ತಿದ್ದನು. ಈ ವಿಚಾರ ತಿಳಿದ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್ ಜೊತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಕೂಡ ಇದ್ದ.
ಆಗಸ್ಟ್ ತಿಂಗಳಲ್ಲಿಯೂ ಸಿಸಿಬಿ ದಾಳಿ ಮಾಡಿತ್ತು, ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು.
ಕಳೆದ ತಿಂಗಳು ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸೂಚನೆ ನೀಡಿದ್ದರು. ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಹೆಚ್ಚುವರಿ ಆಯುಕ್ತ ಡಾ.ಚಂದ್ರಗುಪ್ತಗೆ ಸೂಚಿಸಿದ್ದರು.

