ಅಪರಾಧ ಸುದ್ದಿ

ಗಣೇಶೋತ್ಸವದ ವೇಳೆ ಚಾಕು ಇರಿತ: ಮೂವರು ಯುವಕರ ಮೇಲೆ ಅಪರಿಚಿತರ ದಾಳಿ

Share It

ಬೆಳಗಾವಿ: ನಗರದಲ್ಲಿ ಬುಧವಾರ ನಸುಕಿನಲ್ಲಿ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಮೂವರು ಯುವಕರ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ದರ್ಶನ ಪಾಟೀಲ, ಸತೀಶ ಪೂಜಾರಿ, ಪ್ರವೀಣ ಗುಂಡ್ಯಾಗೋಳ ಚಾಕು ಇರಿತಕ್ಕೆ ಒಳಗಾದವರು. ಇವರ ಮೇಲೆ ಅಪರಿಚಿತರು ಚಾಕು ಇರಿದಿದ್ದಾರೆ. ನಗರದ ಚನ್ನಮ್ಮ ವೃತ್ತದಲ್ಲಿ ಈ ಘಟನೆ ನಡೆದಿದೆ.

ಯುವಕರು ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ವೇಳೆ ಈ ದಾಳಿ ನಡೆದಿದೆ‌ ಪೊಲೀಸರು ಪರಾರಿಯಾಗಿರುವವರನ್ನು ಪತ್ತೆ ಹಚ್ಚಲು ವ್ಯಾಪಕ ಶೋಧ ಕಾರ್ಯ ಕೈಗೊಂಡಿದ್ದಾರೆ.


Share It

You cannot copy content of this page