ಅಪರಾಧ ಸುದ್ದಿ

80 ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Share It

ಪಾಟ್ನಾ: ನವಾಡ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದಲಿತ್ ತೊಲಾ ಗ್ರಾಮದಲ್ಲಿ ದುಷ್ಕರ್ಮಿಗಳ ಗುಂಪೊಂದು ಸುಮಾರು 80 ಮನೆಗಳಿಗೆ ಬೆಂಕಿ ಹಚ್ಚಿದೆ.

ಭೂ ವಿವಾದ ಸಂಬಂಧ ನಡೆದ ಗುಂಡಿನ ದಾಳಿಯ ನಂತರ ಬುಧವಾರ ತಡರಾತ್ರಿ ಘಟನೆ ನಡೆದಿದೆ.
ಮಹಾದಲಿತ ಸಮುದಾಯದ ಜನ 10 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದಾರೆ. ದುಷ್ಕರ್ಮಿಗಳು ಮಹಾದಲಿತ ತೊಲಾಗೆ ಬಂದು ಗುಂಡಿನ ದಾಳಿ ನಡೆಸಿದ್ದಾರೆ.

ನಂತರ, ಜನರು ಒಳಗೆ ಇದ್ದಾಗ ಅವರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಆದರೆ ಅವರ ಸುತ್ತಮುತ್ತಲಿನ ಜ್ವಾಲೆ ಮತ್ತು ಹೊಗೆ ಹೊರಹೊಮ್ಮುವುದನ್ನು ಗಮನಿಸಿದ ತಕ್ಷಣ ಅಲ್ಲಿಂದ ಹೊರ ಬಂದಿದ್ದಾರೆ.

ಗ್ರಾಮದಲ್ಲಿ 100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕೂಡಲೇ ಬೆಂಕಿ ನಂದಿಸಿದ ಕಾರಣ ಮನೆಗಳನ್ನು ಸಂಪೂರ್ಣವಾಗಿ ಸುಟ್ಟುಹೋಗುವುದು ತಪ್ಪಿದೆ.

ದುಷ್ಕರ್ಮಿಗಳು ದೇದೂರು ಗ್ರಾಮದ ಕೃಷ್ಣನಗರ ತೋಲದಲ್ಲಿ ಗುಂಡು ಹಾರಿಸಿದ ಬಳಿಕ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾಸ್ವಾನ್ ಮತ್ತು ಮಾಂಝಿ ಸಮುದಾಯದ ಸದಸ್ಯರು ಕೆಲವು ಸಾಗುವಳಿ ಮಾಡದ ಭೂಮಿಯ ವಿಷಯವಾಗಿ ಬಹಳ ಕಾಲದಿಂದಲೂ ವಿವಾದ ಹೊಂದಿದ್ದಾರೆ. ವಿಷಯ ನ್ಯಾಯಾಯಲಯದಲ್ಲಿ ರುವುದರಿಂದ ಎರಡೂ ಕಡೆಯವರು ಸರ್ಕಾರಿ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

21 ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸುಮಾರು 40-50 ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ನಾವಡ ಎಸ್ಪಿ ಅಭಿನವ್ ಧೀಮಾನ್ ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ ಮತ್ತು ಇತರ 10 ಜನರನ್ನು ಬಂಧಿಸಲಾಗಿದೆ ಮತ್ತು ಎರಡು ಕಡೆಯ ನಡುವಿನ ಜಮೀನು ವಿವಾದ ಘಟನೆಗೆ ಕಾರಣವಾಯಿತು ಎಂದು ಅವರು ಹೇಳಿದರು.

ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಇನ್ನು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯಲು ಸ್ಥಳದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್‌ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


Share It

You cannot copy content of this page