ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ, ಅತ್ಯಾಚಾರ, ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.
ವೈಯಾಲಿಕಾವಲ್ ನಿವಾಸ ಸೇರಿ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್ಎಸ್ಎಲ್ ತಂಡದ ಜತೆಗೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಧ್ಯ ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ, ಗುತ್ತಿಗೆದಾರನಿಗೆ ಬೆದರಿಕೆ, ಅತ್ಯಾಚಾರ, ಜಾತಿ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ.


