ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ

Share It

ಮೈಸೂರು:ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಸೋಮವಾರದಿಂದ ತನಿಖೆ ಚುರುಕುಗೊಳ್ಳಲಿದೆ.

ಮೈಸೂರು ಲೋಕಾಯುಕ್ತಕ್ಕೆ ನ್ಯಾಯಾಲಯದ ತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಈ ತಂಡಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳ ತನಿಖೆ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ, ಮೂಡಾದ ಅಂದಿನ ಅಧ್ಯಕ್ಷ ಮರೀಗೌಡ ಸೇರಿದಂತೆ ಇನ್ನಿತರರನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಈ ನಡುವೆ ಸಿಎಂ ಕಾನೂನು ತಂಡ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಅಥವಾ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆಯುತ್ತಿದೆ.


Share It

You May Have Missed

You cannot copy content of this page