ಉಪಯುಕ್ತ ಸುದ್ದಿ

ಶ್ರೀ ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಸಚಿವ ರಾಮಲಿಂಗಾ ರೆಡ್ಡಿ

Share It


ಕೊಪ್ಪಳ: ಕೊಪ್ಪಳ ಜಿಲ್ಲೆಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸಭೆ ಸಾರಿಗೆ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ರವರ ನೇತೃತ್ವದಲ್ಲಿ ನಡೆಯಿತು.

ದೇವಸ್ಥಾನದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಚಿವರ ಜತೆಗೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡರು. ಸ್ಥಳೀಯ ಜನಪ್ರತಿನಿಧಿಗಳು ಸಚಿವರ ಮುಂದೆ ದೇವಸ್ಥಾನದ ಅಭಿವೃದ್ಧಿಗೆ ಕೆಲವು ಬೇಡಿಕೆಗಳನ್ನು ಇಟ್ಟರು.

ಈ ಸಂದರ್ಭದಲ್ಲಿ ಸಂಸದರಾದ ಕೆ ರಾಜಶೇಖರ ಹಿಟ್ನಾಳ, ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ತು ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ನಲಿನ್ ಅತುಲ್, ಸಿಇಓ ರಾಹುಲ್ ರತ್ನಂ ಪಾಂಡೆ ಸೇರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You cannot copy content of this page