ರಾಜ್ಯಾದ್ಯಂತ ಇಂದು ಉತ್ತಮ ಮಳೆಯಾಗುವ ಮುನ್ಸೂಚನೆ
ಬೆಂಗಳೂರು: ಶನಿವಾರ ಸುರಿದ ಮಳೆ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ್ದು, ರಸ್ತೆಗಳು ಜಲಾವೃತವಾಗಿ ಮರಗಳು ಧರೆಗುರುಳಿದೆ. ಇಂದು ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಶನಿವಾರ ರಾಜ್ಯದ ಹಲವೆಡೆ ಉತ್ತು ಮಳೆಯಾಗಿದ್ದು, ಹಿಂಗಾರು ಚುರುಕುಗೊಂಡಿದೆ.


